23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು


ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭ವ) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya
error: Content is protected !!