22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು


ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭ವ) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
error: Content is protected !!