September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

ಬೆಳ್ತಂಗಡಿ : ಸ್ಪಂದನ ಬಂಟರ ಸೇವಾ ತಂಡ ಬೆಳ್ತಂಗಡಿ ಇದರ 25ನೇ ಸೇವಾ ಕಾರ್ಯಕ್ರಮ ಜ.15ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರಗಿತು.

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತ೦ಡದ ಗೌರವಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಲಾಯಿಲ ಬಂಟರ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ ಗೌರವ ಉಪಸ್ಥಿತರಿದ್ದರು.

ಆರ್ಥಿಕ ಅಸಕ್ತರಿಗೆ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ, ವೈದ್ಯಕೀಯ ಚಿಕಿತ್ಸೆಗಾಗಿ ಒಟ್ಟು ಸೇರಿ 25 ಕುಟುಂಬದವರಿಗೆ ಸಹಾಯಧನ ರೂ. 3ಲಕ್ಷ 50 ಸಾವಿರ ಫಲಾನುಭವಿ ಚೆಕ್ ನೀಡಲಾಯಿತು.


ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀನಿವಾಸ್, ಕೋಶಾಧಿಕಾರಿ ಸುರೇಶ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಅಧ್ಯಕ್ಷರಾದ ಸುರೇಶ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ನಿರೂಪಿಸಿ, ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya
error: Content is protected !!