37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಜ.14 ರಂದು ನಡೆದಿದೆ.

ನಡ ಗ್ರಾಮದ ಹೊಕ್ಕಿಲ ನಿವಾಸಿ ನಿರೀಕ್ಷಾ (8) ಗಾಯಗೊಂಡ ಬಾಲಕಿ.

ನಡ ಗ್ರಾಮದ ಹೊಕ್ಕಿಲ ನಿವಾಸಿ ವೇದಾವತಿ ಅವರು ನೀಡಿದ ದೂರಿನಂತೆ, ಅವರ ಅತ್ತಿಗೆ ನೀಲಾ ಹಾಗೂ ಪತಿಯ ಅಣ್ಣನ ಮಗು ನಿರೀಕ್ಷಾ (8) ಜತೆ ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಿಂದ ಅವರ ಮನೆ ಹೊಕ್ಕಿಲ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಕುತ್ರೊಟ್ಟು ಬಳಿ ದ್ವಿ ಚಕ್ರ ವಾಹನದ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ನಿರೀಕ್ಷಾಳಿಗೆ ಢಿಕ್ಕಿ ಹೊಡೆದಿದ್ದಾನೆ.

ಪರಿಣಾಮ ಅವಳು ಅಲ್ಲಿಯೇ ರಸ್ತೆಗೆ ಬಿದ್ದು ಬಲಬದಿಯ ಹಣೆಗೆ ಗುದ್ದಿದ ರಕ್ತಗಾಯ, ಬಲ ಕಾಲಿನ ಮೊಣಗಂಟಿಗೆ ತರಚಿದ ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಜ್ಯೋತಿ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!