28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

ಅನಾರು : ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡು ಜ. 18 ರ ವರೆಗೆ ಜರುಗಲಿದೆ.

ಜ. 14 ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಟ್ರಮೆ ಗ್ರಾ. ಪಂ. ಅಧ್ಯಕ್ಷ ಮನೋಜ್ ಆಗಮಿಸಿದ್ದರು.

ವೇದಿಕೆಯಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ, ಸೇವಾ ಸಮಿತಿಯ ಅಧ್ಯಕ್ಷರಾದ ಹರೀಶ್ ಗೌಡ ಅಪ್ರೋಡಿ, ಉಪಾಧ್ಯಕ್ಷರಾದ ಪದ್ಮನಾಭ ಕಾಯಿಲ, ಕಾರ್ಯದರ್ಶಿ ಶರಶ್ಚಂದ್ರ ಹಿರ್ತಡ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ ರವರನ್ನು ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು. “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಬಿಡುಗಡೆಗೊಳಿಸಿದರು.

ಭವ್ಯ ಕಾಯಿಲ ಪ್ರಾರ್ಥಿಸಿ, ಜಯರಾಮ ನೆಕ್ಕಿಲು ಸ್ವಾಗತಿಸಿದರು. ಧರ್ಮಸ್ಥಳದ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ರಾವ್ ನಿರೂಪಿಸಿ, ವರ್ಣಾಶ್ರೀ ಧನ್ಯವಾದವಿತ್ತರು.

ರಾತ್ರಿ ಸ. ಉ. ಹಿ. ಪ್ರಾ. ಶಾಲೆ, ಅನಾರು, ಪಟ್ರಮೆ ಮತ್ತು ಸ.ಕಿ. ಪ್ರಾ.ಶಾಲೆ, ಸುರ್ಯತ್ತಾವು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya
error: Content is protected !!