ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಬಳಂಜ ಇದರ ವತಿಯಿಂದ ನಡೆಯುವ ವಾರ್ಷಿಕ ಕ್ರೀಡಾಕೂಟ ಹಾಗೂ ಗಣರಾಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅಟ್ಲಾಜೆ ಕ್ರೀಡಾಂಗಣದಲ್ಲಿ ನಡೆಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅದ್ಯಕ್ಷ, ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಆಂಮತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಪ್ರಗತಿಪರ ಕೃಷಿಕ, ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಸರ್ವೋದಯ ಫ್ರೆಂಡ್ಸ್ ಕ್ಲಬ್ ಸಮಾಜಮುಖಿ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ವೋದಯ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಸುರೇಶ್ ಪೂಜಾರಿ ಹೇವ ವಹಿಸಿ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಕೋರಿದರು.

ವೇದಿಕೆಯಲ್ಲಿ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಕ್ರೀಡಾ ಕಾರ್ಯದರ್ಶಿ ಲತೇಶ್ ಪೆರಾಜೆ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಸಮಿತಿಯ ಸರ್ವ ಪದಾಧಿಕಾರಿಗಳು ಸಹಕರಿಸಿದರು.

ಹರೀಶ್ ವೈ ಚಂದ್ರಮ ಸ್ವಾಗತಿಸಿ, ವಂದಿಸಿದರು.

Leave a Comment

error: Content is protected !!