ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಬಳಂಜ ಇದರ ವತಿಯಿಂದ ನಡೆಯುವ ವಾರ್ಷಿಕ ಕ್ರೀಡಾಕೂಟ ಹಾಗೂ ಗಣರಾಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅಟ್ಲಾಜೆ ಕ್ರೀಡಾಂಗಣದಲ್ಲಿ ನಡೆಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅದ್ಯಕ್ಷ, ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಆಂಮತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಪ್ರಗತಿಪರ ಕೃಷಿಕ, ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಸರ್ವೋದಯ ಫ್ರೆಂಡ್ಸ್ ಕ್ಲಬ್ ಸಮಾಜಮುಖಿ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ವೋದಯ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಸುರೇಶ್ ಪೂಜಾರಿ ಹೇವ ವಹಿಸಿ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಕೋರಿದರು.

ವೇದಿಕೆಯಲ್ಲಿ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಕ್ರೀಡಾ ಕಾರ್ಯದರ್ಶಿ ಲತೇಶ್ ಪೆರಾಜೆ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಸಮಿತಿಯ ಸರ್ವ ಪದಾಧಿಕಾರಿಗಳು ಸಹಕರಿಸಿದರು.

ಹರೀಶ್ ವೈ ಚಂದ್ರಮ ಸ್ವಾಗತಿಸಿ, ವಂದಿಸಿದರು.

Related posts

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!