July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬ‌ರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ಎನ್.ಐ.ಟಿ.ಕೆ. ( ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ) ಯು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಈ ಮೊದಲು ಶಶಾಂಕ ಕುಳಮರ್ವ ಅವರು ಚೆನ್ನೈಯ ಐ.ಐ.ಟಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಮದ್ರಾಸ್‌ನಿಂದ ಗಣಿತದಲ್ಲಿ ಎಮ್.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಇದೀಗ ಎನ್.ಐ.ಟಿ.ಕೆ. ಯಿಂದ ಡಾ. ಸುರೇಶ್ ಎಂ. ಹೆಗಡೆ ಹಾಗೂ ಡಾ. ಮನು ಬಸವರಾಜು ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಐ.ಐ.ಎಸ್.ಸಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಸೈನ್ಸ್) ನ ಕಂಪ್ಯೂಟರ್ ಸೈನ್ಸ್‌ ಆಂಡ್ ಆಟೋಮೇಷನ್‌ ವಿಭಾಗದಲ್ಲಿ ಪೋಸ್ಟ್-ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ನಿವೃತ್ತ ಪ್ರಾಂಶುಪಾಲರಾದ ಪ್ರೊ| ಗಣಪತಿ ಭಟ್ ಕುಳಮರ್ವ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ವಸಂತಿ ಕುಳಮರ್ವ ಅವರ ಪುತ್ರ.

Related posts

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!