25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬ‌ರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ಎನ್.ಐ.ಟಿ.ಕೆ. ( ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ) ಯು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಈ ಮೊದಲು ಶಶಾಂಕ ಕುಳಮರ್ವ ಅವರು ಚೆನ್ನೈಯ ಐ.ಐ.ಟಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಮದ್ರಾಸ್‌ನಿಂದ ಗಣಿತದಲ್ಲಿ ಎಮ್.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಇದೀಗ ಎನ್.ಐ.ಟಿ.ಕೆ. ಯಿಂದ ಡಾ. ಸುರೇಶ್ ಎಂ. ಹೆಗಡೆ ಹಾಗೂ ಡಾ. ಮನು ಬಸವರಾಜು ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಐ.ಐ.ಎಸ್.ಸಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಸೈನ್ಸ್) ನ ಕಂಪ್ಯೂಟರ್ ಸೈನ್ಸ್‌ ಆಂಡ್ ಆಟೋಮೇಷನ್‌ ವಿಭಾಗದಲ್ಲಿ ಪೋಸ್ಟ್-ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ನಿವೃತ್ತ ಪ್ರಾಂಶುಪಾಲರಾದ ಪ್ರೊ| ಗಣಪತಿ ಭಟ್ ಕುಳಮರ್ವ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ವಸಂತಿ ಕುಳಮರ್ವ ಅವರ ಪುತ್ರ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya
error: Content is protected !!