24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬ‌ರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ಎನ್.ಐ.ಟಿ.ಕೆ. ( ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ) ಯು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಈ ಮೊದಲು ಶಶಾಂಕ ಕುಳಮರ್ವ ಅವರು ಚೆನ್ನೈಯ ಐ.ಐ.ಟಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಮದ್ರಾಸ್‌ನಿಂದ ಗಣಿತದಲ್ಲಿ ಎಮ್.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಇದೀಗ ಎನ್.ಐ.ಟಿ.ಕೆ. ಯಿಂದ ಡಾ. ಸುರೇಶ್ ಎಂ. ಹೆಗಡೆ ಹಾಗೂ ಡಾ. ಮನು ಬಸವರಾಜು ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಐ.ಐ.ಎಸ್.ಸಿ. (ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಸೈನ್ಸ್) ನ ಕಂಪ್ಯೂಟರ್ ಸೈನ್ಸ್‌ ಆಂಡ್ ಆಟೋಮೇಷನ್‌ ವಿಭಾಗದಲ್ಲಿ ಪೋಸ್ಟ್-ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ನಿವೃತ್ತ ಪ್ರಾಂಶುಪಾಲರಾದ ಪ್ರೊ| ಗಣಪತಿ ಭಟ್ ಕುಳಮರ್ವ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ವಸಂತಿ ಕುಳಮರ್ವ ಅವರ ಪುತ್ರ.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!