26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!