38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!