22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya
error: Content is protected !!