23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya
error: Content is protected !!