25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya
error: Content is protected !!