September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ ಬಿಷಪ್ ರೆ.ಫಾ. ಎಲೋಶಿಯಸ್ ಪಾವ್ಲ್ ಡಿಸೋಜ ರವರು ಪವಿತ್ರ ಶಿಲುಬೆಯನ್ನು ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ರೆ.ಫಾ. ವಾಲ್ಟರ್ ಡಿ’ಮೆಲ್ಲೊ ಹಾಗೂ ಮಂಜೊಟ್ಟಿ ಚರ್ಚಿನ ಗುರುಗಳಾದ ರೆ.ಫಾ. ಪ್ರವೀಣ್ ಡಿಸೋಜ ಹಸ್ತಾಂತರಿಸಿದರು.

ಶಿಲುಬೆಯನ್ನು ಭವ್ಯ ಮೆರವಣಿಗೆ ಮೂಲಕ ಚರ್ಚೆಗೆ ಕೊಂಡಯ್ಯಲಾಯಿತು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬೆಳ್ತಂಗಡಿ ಚರ್ಚ್‌ನಲ್ಲಿ ಭಾವ್ಯೆಕ್ಯತೆಯ ಭಾನುವಾರ ಆಚರಣೆಯ ಪ್ರಯುಕ್ತ ಪವಿತ್ರ ಪರಮ ಪ್ರಸಾದವನ್ನು ಸಾರ್ವಜನಿಕವಾಗಿ ಭವ್ಯ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಬೆಳ್ತಂಗಡಿ ಹಾಗೂ ಮಂಜೊಟ್ಟೆ ಚರ್ಚಿನ ಸಾವಿರಾರು ಭಕ್ತರು ಭಾಗವಹಿಸಿದರು. ಈ ಕಾರ್ಯದಲ್ಲಿ ಬೆಳ್ತಂಗಡಿ ಚರ್ಚಿನ ಪ್ರದಾನ ಗುರುಗಳಾದ ವಂದನಿಯ ವಾಲ್ಟರ್ ಡಿ’ಮೆಲ್ಲೊ, ಹೋಲಿ ರಿಡೀಮರ್ ಶಾಲೆಯ ಪ್ರಾಂಶುಪಾಲರಾದ ವಂದನಿಯ ಕ್ಲಿಪರ್ಡ್ ಪಿಂಟೊ, ಮಂಜೊಟ್ಟಿ ಚರ್ಚಿನ ಗುರುಗಳಾದ ಪ್ರವೀಣ್ ಡಿಸೋಜ, ಬೆಳ್ತಂಗಡಿ ವಲಯ ಚರ್ಚಿನ ಗುರುಗಳು ಹಾಗೂ ಎರಡೂ ಚರ್ಚಿನ ಪಾಲನಾ ಪರಿಷತ್ತಿನ ಉಪಾಧ್ಯಕ್ಷ, ಕಾರ್ಯದರ್ಶಿ , ಆಯೋಗಗಳ ಸಂಯೋಜಕರು ಹಾಗೂ ಪಾಲನ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Related posts

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!