25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

ಬೆಳ್ತಂಗಡಿ: ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಪ್ರಯುಕ್ತ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನಾ ಸಮಾರಂಭ ಜ. 15ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಅಧ್ಯಕ್ಷ ಈಶ್ವರ ಭಟ್ ಮೈಲತ್ತೋಡಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ಅತಿಥಿಗಳಾಗಿ ಸುವರ್ಣ ಕ್ಲಿನಿಕ್, ಅಳದಂಗಡಿಯ . ಡಾ. ಹರಿಪ್ರಸಾದ್, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ಶ್ರೀಮತಿ ಸುಜಿತಾ ವಿ. ಬಂಗೇರ, ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಭಾಗವಹಿಸಿದ್ದರು.

ವೇದಿಕೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ , ಮಾಜಿ ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ಪ್ರಮುಖರೋದ ಸುಮತಿ ಪ್ರಮೋದ್, ಸತೀಶ್ ಕಾಶಿಪಟ್ನ, ಎಂ.ಕೆ ಪ್ರಸಾದ್, ಭಗೀರಥ ಜಿ., ಸುಂದರ ಪೂಜಾರಿ, ಲೋಕೇಶ್ ಗೌಡ ಕೊಯ್ಯೂರು, ರಾಜಶೇಖರ ಶೆಟ್ಟಿ ಮಡಂತ್ಯಾರು, ಎಂ.ಎಸ್ ವಮ೯, ಶ್ರೀಮತಿ ನಮಿತಾ, ಲಕ್ಷ್ಮಣ ಗೌಡ, ಡಿ.ಕೆ ಅಯೂಬ್, ಗುರುದೇವ ಕಾಲೇಜು ಪ್ರಾಂಶುಪಾಲ ಸುರೇಶ್, ಉಪಪ್ರಾಂಶುಪಾಲ ಶಮೀಮುಲ್ಲಾ, ವೆನ್ಲಾಕ್ ಆಸ್ಪತ್ರೆಯ ಡಾ.ದಿಶಾ ಮತ್ತು ಡಾ. ಆಂಟನಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶೈಕ್ಷಣಿಕ ದಾನಿಗಳಿಗಳನ್ನು ಅಭಿನಂದನೆ ಸಲ್ಲಿಸಲಾಯಿತು. ನ್ಯಾಯವಾದಿ ಮನೋಹರ್ ಇಳಂತಿಲ ಸ್ವಾಗತಿಸಿದರು. ಉಪನ್ಯಾಸಕರಾದ ಹರೀಶ್ ಪೂಜಾರಿ ಮತ್ತು ಸೌಜನ್ಯ ಕಾಯ೯ಕ್ರಮ ನಿರೂಪಿಸಿದರು. ಗುರುದೇವ ಪ್ರ.ದ ಕಾಲೇಜು ಪ್ರಾಂಶುಪಾಲ ಡಾ.ಸವಿತಾ ವಂದಿಸಿದರು.

Related posts

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!