September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

ಬೆಳ್ತಂಗಡಿ: ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಪ್ರಯುಕ್ತ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನಾ ಸಮಾರಂಭ ಜ. 15ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಅಧ್ಯಕ್ಷ ಈಶ್ವರ ಭಟ್ ಮೈಲತ್ತೋಡಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ಅತಿಥಿಗಳಾಗಿ ಸುವರ್ಣ ಕ್ಲಿನಿಕ್, ಅಳದಂಗಡಿಯ . ಡಾ. ಹರಿಪ್ರಸಾದ್, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ಶ್ರೀಮತಿ ಸುಜಿತಾ ವಿ. ಬಂಗೇರ, ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಭಾಗವಹಿಸಿದ್ದರು.

ವೇದಿಕೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ , ಮಾಜಿ ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ಪ್ರಮುಖರೋದ ಸುಮತಿ ಪ್ರಮೋದ್, ಸತೀಶ್ ಕಾಶಿಪಟ್ನ, ಎಂ.ಕೆ ಪ್ರಸಾದ್, ಭಗೀರಥ ಜಿ., ಸುಂದರ ಪೂಜಾರಿ, ಲೋಕೇಶ್ ಗೌಡ ಕೊಯ್ಯೂರು, ರಾಜಶೇಖರ ಶೆಟ್ಟಿ ಮಡಂತ್ಯಾರು, ಎಂ.ಎಸ್ ವಮ೯, ಶ್ರೀಮತಿ ನಮಿತಾ, ಲಕ್ಷ್ಮಣ ಗೌಡ, ಡಿ.ಕೆ ಅಯೂಬ್, ಗುರುದೇವ ಕಾಲೇಜು ಪ್ರಾಂಶುಪಾಲ ಸುರೇಶ್, ಉಪಪ್ರಾಂಶುಪಾಲ ಶಮೀಮುಲ್ಲಾ, ವೆನ್ಲಾಕ್ ಆಸ್ಪತ್ರೆಯ ಡಾ.ದಿಶಾ ಮತ್ತು ಡಾ. ಆಂಟನಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶೈಕ್ಷಣಿಕ ದಾನಿಗಳಿಗಳನ್ನು ಅಭಿನಂದನೆ ಸಲ್ಲಿಸಲಾಯಿತು. ನ್ಯಾಯವಾದಿ ಮನೋಹರ್ ಇಳಂತಿಲ ಸ್ವಾಗತಿಸಿದರು. ಉಪನ್ಯಾಸಕರಾದ ಹರೀಶ್ ಪೂಜಾರಿ ಮತ್ತು ಸೌಜನ್ಯ ಕಾಯ೯ಕ್ರಮ ನಿರೂಪಿಸಿದರು. ಗುರುದೇವ ಪ್ರ.ದ ಕಾಲೇಜು ಪ್ರಾಂಶುಪಾಲ ಡಾ.ಸವಿತಾ ವಂದಿಸಿದರು.

Related posts

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya
error: Content is protected !!