25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

ಬೆಳ್ತಂಗಡಿ: ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಪ್ರಯುಕ್ತ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನಾ ಸಮಾರಂಭ ಜ. 15ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಅಧ್ಯಕ್ಷ ಈಶ್ವರ ಭಟ್ ಮೈಲತ್ತೋಡಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ಅತಿಥಿಗಳಾಗಿ ಸುವರ್ಣ ಕ್ಲಿನಿಕ್, ಅಳದಂಗಡಿಯ . ಡಾ. ಹರಿಪ್ರಸಾದ್, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ಶ್ರೀಮತಿ ಸುಜಿತಾ ವಿ. ಬಂಗೇರ, ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಭಾಗವಹಿಸಿದ್ದರು.

ವೇದಿಕೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ , ಮಾಜಿ ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ಪ್ರಮುಖರೋದ ಸುಮತಿ ಪ್ರಮೋದ್, ಸತೀಶ್ ಕಾಶಿಪಟ್ನ, ಎಂ.ಕೆ ಪ್ರಸಾದ್, ಭಗೀರಥ ಜಿ., ಸುಂದರ ಪೂಜಾರಿ, ಲೋಕೇಶ್ ಗೌಡ ಕೊಯ್ಯೂರು, ರಾಜಶೇಖರ ಶೆಟ್ಟಿ ಮಡಂತ್ಯಾರು, ಎಂ.ಎಸ್ ವಮ೯, ಶ್ರೀಮತಿ ನಮಿತಾ, ಲಕ್ಷ್ಮಣ ಗೌಡ, ಡಿ.ಕೆ ಅಯೂಬ್, ಗುರುದೇವ ಕಾಲೇಜು ಪ್ರಾಂಶುಪಾಲ ಸುರೇಶ್, ಉಪಪ್ರಾಂಶುಪಾಲ ಶಮೀಮುಲ್ಲಾ, ವೆನ್ಲಾಕ್ ಆಸ್ಪತ್ರೆಯ ಡಾ.ದಿಶಾ ಮತ್ತು ಡಾ. ಆಂಟನಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶೈಕ್ಷಣಿಕ ದಾನಿಗಳಿಗಳನ್ನು ಅಭಿನಂದನೆ ಸಲ್ಲಿಸಲಾಯಿತು. ನ್ಯಾಯವಾದಿ ಮನೋಹರ್ ಇಳಂತಿಲ ಸ್ವಾಗತಿಸಿದರು. ಉಪನ್ಯಾಸಕರಾದ ಹರೀಶ್ ಪೂಜಾರಿ ಮತ್ತು ಸೌಜನ್ಯ ಕಾಯ೯ಕ್ರಮ ನಿರೂಪಿಸಿದರು. ಗುರುದೇವ ಪ್ರ.ದ ಕಾಲೇಜು ಪ್ರಾಂಶುಪಾಲ ಡಾ.ಸವಿತಾ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!