22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಸವನ್ ರೈ, ದಂತವೈದ್ಯರು, ಡಾ. ಶಿರಸ್, ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರಾದ ದಿವ್ಯಜ್ಯೋತಿ, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಗೋಪಿಕೃಷ್ಣರವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಸಿಂಧು ವಿ.ಎಮ್.ರವರು ಕಾರ್ಯಕ್ರಮ ನಿರೂಪಿಸಿದರು.

Related posts

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!