September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಸವನ್ ರೈ, ದಂತವೈದ್ಯರು, ಡಾ. ಶಿರಸ್, ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರಾದ ದಿವ್ಯಜ್ಯೋತಿ, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಗೋಪಿಕೃಷ್ಣರವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಸಿಂಧು ವಿ.ಎಮ್.ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
error: Content is protected !!