25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬಡಗನ್ನೂರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.15 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾರಂಭದಲ್ಲಿ ಶ್ರೀ ಕ್ಷೇತ್ರದ ಸರ್ವಶಕ್ತಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ ವಿಶ್ವದಾದ್ಯಂತ ಇರುವ ಕ್ಷೇತ್ರ ಭಕ್ತಾಧಿಗಳು ತುಳುನಾಡಿನ ಕಾರಣಿಕ ಶಕ್ತಿಗಳ ಮೂಲಕ್ಷೇತ್ರದ ನೇಮೋತ್ಸವ ಮತ್ತು ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾಗುವಂತೆ ಹೇಳಿ ಶುಭ ಹಾರೈಸಿದರು.


ಜಾತ್ರೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶೈಲೇಂದ್ರ ವೈ ಸುವರ್ಣ, ಮಂಗಳೂರು ಮಾತನಾಡಿ ಸಮಾಜದ ಎಲ್ಲಾ ಸಂಘಸಂಸ್ಥೆಗಳು ಜಾತ್ರಾ ಮಹೋತ್ಸವ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶೈಲೇಂದ್ರ ವೈ ಸುವರ್ಣ, ಮಂಗಳೂರು ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಕೆ ಪೂಜಾರಿ ಇವರುಗಳನ್ನು ಕ್ಷೇತ್ರದ ಪರವಾಗಿ ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷ ಕೆ ಚಿತ್ತರಂಜನ್ ಗೌರವಾಧ್ಯಕ್ಷ ಜಯಂತ್ ನಡುಬೈಲು, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ನಿತ್ಯಾನಂದ ಡಿ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಚಂದ್ರಶೇಖರ್ ಉಚ್ಚಿಲ್, ಸಂಜೀವ ಪೂಜಾರಿ,ಬಿರ್ವ, ಸುರೇಂದ್ರ ಪೂಜಾರಿ ಮುಂಬಯಿ, ಡಾ ರಾಜಾರಾಂ ಉಪ್ಪಿನಂಡಿ ಸುರೇಶ್ ಪೂಜಾರಿ ಅಳದಂಗಡಿ, ಡಿ ಆರ್ ರಾಜು ಪೂಜಾರಿ ಕಾರ್ಕಳ, ಯುವವಾಹಿನಿ ಕೆಂದ್ರಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ಗೆಜ್ಜೆಗಿರಿ ವಕ್ತಾರ ರಾಜೇಂದ್ರ ಚಿಲಿಂಬಿ,ಸಮಿತಿ ಸದಸ್ಯರಾದ ವಿದ್ಯಾರಾಖೇಶ್ ಮಂಗಳೂರು, ಡಾ, ರಾಕೇಶ್ ಕುಮಾರ್, ನಾರಾಯಣ ಪೂಜಾರಿ ಮಚ್ಚಿನ, ಪ್ರವೀಣ್ ಅಂಚನ್ ಅರ್ಕುಲ, ಡಾ ಸಂತೋಷ್ ಕುಮಾರ್ ಪೆರಂಪಳ್ಳಿ, ದೀಪಕ್ ಪಿಲಾರ್, ಶೇಖರ ಬಂಗೇರ ಬೆಳ್ತಂಗಡಿ, ಜಯರಾಮ ಬಂಗೇರ ಬೆಳ್ತಂಗಡಿ, ತ್ರಿವೇಣಿ ಕರುಣಾಕರ ಪೆರೋಡಿ, ಶೇಖರ ಪೆರೋಡಿ, ಉಮಾನಾಥ ಮಂಗಳೂರು, ಕೇಶವ ಎಂ ಎಸ್, ರಕ್ಷೀತ್ ಕುಂಪಾಳ, ಪ್ರಶಾಂತ್ ಬೆಳ್ತಂಗಡಿ ನೀಲಯ್ಯ ಮಳಲಿ, ಮತ್ತಿತರರು ಗಣ್ಯರು, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಪುತ್ತೂರು ಸ್ವಾಗತಿಸಿ ವಂದಿಸಿದರು.

Related posts

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya
error: Content is protected !!