32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇಂದು ಬದಿ ಮೇಲೆ ಉಳ್ಳಾಲ್ತಿ, ಪೊಸಲ್ಲಾಯಿ, ಕುಮಾರಸ್ವಾಮಿ ದೈವಗಳಿಗೆ ನೇಮ ಜರುಗಲಿದೆ.

ಜ.16ರಂದು ಸಂಜೆ ಬದಿಮೇಲೆ ನೆತ್ತರಮುಗುಳಿ ದೈವದ ನೇಮ, ಜ.17ರಂದು ರಾತ್ರಿ ಆಶತ್ಥಕಟ್ಟೆ ಉತ್ಸವ, ಜ. 18ರಂದು ರಾತ್ರಿ ಪುಷ್ಕರಣಿ ಕಟ್ಟೆ ಉತ್ಸವ, ಜ.19ರಂದು ರಾತ್ರಿ ಪೇಟೆ ಸವಾರಿ, ಜ. 20ರಂದು ರಾತ್ರಿ ಚಂದ್ರಮಂಡಲ ರಥೋತ್ಸವ, ಜ.21ರಂದು ಬೆಳಗ್ಗೆ ದರ್ಶನ ಬಲಿ ಉತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ ಹಾಗೂ ಶ್ರೀ ಭೂತ ಬಲಿ ಹಾಗೂ ಜ. 22ರಂದು ಧ್ವಜಾವರೋಹಣ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಜ.19ರಂದು ಸಂಜೆ 7ರಿಂದ ನೃತ್ಯಾರ್ಪಣಂ, ಜ.20ರಂದು ಸಂಜೆ 6.30ರಿಂದ ಹಿಂದು ಸ್ಥಾನಿ ಶಾಸ್ತ್ರೀಯ ಸಂಗೀತ,ನೃತ್ಯ ಸಂಭ್ರಮ ಜ.21ರಂದು ಸಂಜೆ6.30ರಿಂದ ಅಯೋಧ್ಯಾ ಶ್ರೀರಾಮ ಚರಿತಂ ಯಕ್ಷಗಾನ ಜರಗಲಿದೆ.

Related posts

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!