April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇಂದು ಬದಿ ಮೇಲೆ ಉಳ್ಳಾಲ್ತಿ, ಪೊಸಲ್ಲಾಯಿ, ಕುಮಾರಸ್ವಾಮಿ ದೈವಗಳಿಗೆ ನೇಮ ಜರುಗಲಿದೆ.

ಜ.16ರಂದು ಸಂಜೆ ಬದಿಮೇಲೆ ನೆತ್ತರಮುಗುಳಿ ದೈವದ ನೇಮ, ಜ.17ರಂದು ರಾತ್ರಿ ಆಶತ್ಥಕಟ್ಟೆ ಉತ್ಸವ, ಜ. 18ರಂದು ರಾತ್ರಿ ಪುಷ್ಕರಣಿ ಕಟ್ಟೆ ಉತ್ಸವ, ಜ.19ರಂದು ರಾತ್ರಿ ಪೇಟೆ ಸವಾರಿ, ಜ. 20ರಂದು ರಾತ್ರಿ ಚಂದ್ರಮಂಡಲ ರಥೋತ್ಸವ, ಜ.21ರಂದು ಬೆಳಗ್ಗೆ ದರ್ಶನ ಬಲಿ ಉತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ ಹಾಗೂ ಶ್ರೀ ಭೂತ ಬಲಿ ಹಾಗೂ ಜ. 22ರಂದು ಧ್ವಜಾವರೋಹಣ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಜ.19ರಂದು ಸಂಜೆ 7ರಿಂದ ನೃತ್ಯಾರ್ಪಣಂ, ಜ.20ರಂದು ಸಂಜೆ 6.30ರಿಂದ ಹಿಂದು ಸ್ಥಾನಿ ಶಾಸ್ತ್ರೀಯ ಸಂಗೀತ,ನೃತ್ಯ ಸಂಭ್ರಮ ಜ.21ರಂದು ಸಂಜೆ6.30ರಿಂದ ಅಯೋಧ್ಯಾ ಶ್ರೀರಾಮ ಚರಿತಂ ಯಕ್ಷಗಾನ ಜರಗಲಿದೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
error: Content is protected !!