25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

ಆನಂದ ಪೂಜಾರಿ

ಬೆಳ್ತಂಗಡಿ: ನಾಲ್ಕೂರು ಗ್ರಾಮದ ಹಟ್ಟೆಮಾರ್ ಹೊಸಮನೆ ನಿವಾಸಿ ಕೃಷಿಕ ಆನಂದ ಪೂಜಾರಿ (62 ವ) ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ (ಜ. 15) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು.

ಮೂರು ದಿನದ ಹಿಂದೆ ಆನಂದ ಪೂಜಾರಿಯವರ ಸಹೋದರ ನಾವೂರು ಬಂಗ್ಲೆ ಮನೆ ನಿವಾಸಿ, ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚಂದ್ರಹಾಸ ಪೂಜಾರಿ (60ವ)ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಸಹೋದರರಿಬ್ಬರ ಸಾವಿನಿಂದ ಕುಟುಂಬ, ಬಂಧು ಬಳಗ ಶೋಕ ಸಾಗರದಲ್ಲಿ ಮುಳುಗಿದೆ.

ಮೃತ ಆನಂದ ಪೂಜಾರಿಯವರು ಪತ್ನಿ ಗುಲಾಬಿ, ಮೂವರು ಮಕ್ಕಳಾದ ಯೋಗೀಶ್ ಪೂಜಾರಿ, ಪ್ರಮೀಳಾ, ಹರೀಶ್ ಅವರನ್ನು ಆಗಲಿದ್ದಾರೆ. ಮೃತ ಚಂದ್ರಹಾಸ ಪೂಜಾರಿಯವರು ಪತ್ನಿ ಪ್ರೇಮಾ, ಮೂವರು ಮಕ್ಕಳಾದ ಪ್ರಸನ್ನ, ಪ್ರಸಾದ್, ಪ್ರತಿಮಾ, ಸಹೋದರರಾದ ಕೃಷ್ಣಪ್ಪ ಪೂಜಾರಿ,ಬಾಬು ಪೂಜಾರಿ, ದೇವದಾಸ ಪೂಜಾರಿ,ದಾಮೋದರ ಪೂಜಾರಿ,ಶಶಿಧರ ಪೂಜಾರಿ ಹಾಗೂ ಕಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!