23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

ಆನಂದ ಪೂಜಾರಿ

ಬೆಳ್ತಂಗಡಿ: ನಾಲ್ಕೂರು ಗ್ರಾಮದ ಹಟ್ಟೆಮಾರ್ ಹೊಸಮನೆ ನಿವಾಸಿ ಕೃಷಿಕ ಆನಂದ ಪೂಜಾರಿ (62 ವ) ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ (ಜ. 15) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು.

ಮೂರು ದಿನದ ಹಿಂದೆ ಆನಂದ ಪೂಜಾರಿಯವರ ಸಹೋದರ ನಾವೂರು ಬಂಗ್ಲೆ ಮನೆ ನಿವಾಸಿ, ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚಂದ್ರಹಾಸ ಪೂಜಾರಿ (60ವ)ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಸಹೋದರರಿಬ್ಬರ ಸಾವಿನಿಂದ ಕುಟುಂಬ, ಬಂಧು ಬಳಗ ಶೋಕ ಸಾಗರದಲ್ಲಿ ಮುಳುಗಿದೆ.

ಮೃತ ಆನಂದ ಪೂಜಾರಿಯವರು ಪತ್ನಿ ಗುಲಾಬಿ, ಮೂವರು ಮಕ್ಕಳಾದ ಯೋಗೀಶ್ ಪೂಜಾರಿ, ಪ್ರಮೀಳಾ, ಹರೀಶ್ ಅವರನ್ನು ಆಗಲಿದ್ದಾರೆ. ಮೃತ ಚಂದ್ರಹಾಸ ಪೂಜಾರಿಯವರು ಪತ್ನಿ ಪ್ರೇಮಾ, ಮೂವರು ಮಕ್ಕಳಾದ ಪ್ರಸನ್ನ, ಪ್ರಸಾದ್, ಪ್ರತಿಮಾ, ಸಹೋದರರಾದ ಕೃಷ್ಣಪ್ಪ ಪೂಜಾರಿ,ಬಾಬು ಪೂಜಾರಿ, ದೇವದಾಸ ಪೂಜಾರಿ,ದಾಮೋದರ ಪೂಜಾರಿ,ಶಶಿಧರ ಪೂಜಾರಿ ಹಾಗೂ ಕಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya
error: Content is protected !!