23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು


ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.
ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭ವ) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya
error: Content is protected !!