March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!