July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!