23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya
error: Content is protected !!