September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!