22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!