September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!