23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!