April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

ಮಚ್ಚಿನ ಗ್ರಾಮ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‌ಗೆ ಸೇರಿದ ಜಂಟಿ ರಸ್ತೆ ಬಂಗೇರಕಟ್ಟೆ, ನೆತ್ತರ ರಸ್ತೆ ಡಾಮರೀಕರಣ ಎದ್ದು ಮಣ್ಣಿನ ರಸ್ತೆಯಾಗಿರುವ ಈ ರಸ್ತೆಗೆ ಡಾಮರೀಕರಣದ ಭಾಗ್ಯ ಎಂದು ಸ್ವಾಮಿ ಈ ಭಾಗದ ಜನರು ಚುನಾವಣೆಯ ಸಂದರ್ಭದಲ್ಲಿ ಭರವಸೆಯನ್ನು ನಂಬಿ ಕಾದು ಕಾಲ ಕಳೆದು ಪಡುವ ಕಷ್ಟ ಇಷ್ಟಲ್ಲ. ಇತ್ತೀಚೆಗೆ ನೆತ್ತರ ಶಾಲೆಯು ಬೆಳ್ಳಿಹಬ್ಬ ಆಚರಿಸಿಕೊಂಡು ಸಂಭ್ರಮ ಪಟ್ಟರು. ಈ ಶಾಲೆಗೆ ಮಾತ್ರ ತೆರಳಲು ಹೊರಲಾಡಿಕೊಂಡೆ ತೆರಳುವಂತಾಯಿತು. ನೆತ್ತರದಿಂದ ಬಂಗೇರ ಕಟ್ಟೆಯವರೆಗೆ ರಸ್ತೆಯ ಚರಂಡಿ, ಪೊದೆಗಳ ಸ್ವಚ್ಛತೆಯನ್ನು ಪ್ರತಿ ವರ್ಷ ಭಾಗ್ಯಶ್ರೀ ಮಿತ್ರಮಂಡಳಿ ಹಾಗೂ ಸ್ಥಳೀಯರ ಸಹಕಾರದಿಂದ ಶ್ರಮಾದಾನದಿಂದ ಮಾಡುತ್ತಿರುವುದು ಸಂತೋಷಕರ ಆದರೆ ಈ ರಸ್ತೆಯ ಸ್ಥಿತಿ ನೋಡುವವರಿಲ್ಲದಂತಾಗಿದೆ.

ಈ ರಸ್ತೆಯು ಬಂಗೇರಕಟ್ಟದಿಂದ ನೆತ್ತರ, ಮಾಣ್ಯ, ಮುಂದಿಲ, ತಣ್ಣೀರುಪಂಥ, ಬಿಜಿಲ, ಪಾಲೆದು, ಪಾಂಡವರಕಲ್ಲು ಪರಿಸರಗಳಿಗೆ ಸಂಪರ್ಕಕೊಂಡಿಯಂತಿರುವ ಈ ರಸ್ತೆ ಇನ್ನೂ ಡಾಮರೀಕರಣ ನಡೆಯದೆ ಇರುವುದು ಶೋಚನಿಯ. ಈ ಭಾಗದ ಜನರಿಗೆ ತುರ್ತು ಆರೋಗ್ಯದ ಸಮಸ್ಯೆಗಳು ಬಂದಾಗ ವಾಹನಗಳು ಬರಲು ಹಿಂದೇಟು ಹಾಕುವಂತ ಸ್ಥಿತಿ ನಿರ್ಮಾಣಗೊಂಡಿದೆ. ದಿನ ನಿತ್ಯ ಕೂಲಿ ಕೆಲಸಗಳಿಗೆ ಶಾಲಾ ಮಕ್ಕಳು ಶಾಲೆಗೆ ತೆರಳಲು ಸಮಯಕ್ಕಿಂತ ಮುಂಚಿತವಾಗಿ ಸಿದ್ದರಾಗಬೇಕಾಗಿದೆ. ಎಷ್ಟೆ ಅಪಘಾತಗಳು ಈ ರಸ್ತೆಯಲ್ಲಿ ನಡೆದರು ಕಣ್ಣ ಮುಂದೆ ಕೂತಿರುವ ಈ ರಸ್ತೆಯ ಜಂಟಿ ಪಂಚಾಯತ್‌ಗಳು ಸಂಬಂಧ ಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು, ಇನ್ನಾದರು ತಾವು ಈ ಮಕ್ಕಳ, ವೃದ್ಧರ, ಜನರ ಕಷ್ಟಗಳನ್ನು ಪರಿಹರಿಸಿ ಶೀಘ್ರದಲ್ಲಿ ಡಾಮರೀಕರಣ ನಡೆಸಿ ಈ ಭಾಗದ ಜನರು, ಶಾಲಾ ಮಕ್ಕಳು ಪಡುವಂತಾ ಕಷ್ಟಗಳಿಗೆ ಮುಕ್ತಿ ದೊರೆಯಲಿ ಎಂದು ಗ್ರಾಮಸ್ಥರ ಆಗ್ರಹ.
ವರದಿ- ಹರ್ಷ ಬಳ್ಳಮಂಜ

Related posts

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!