April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!