23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya
error: Content is protected !!