22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
error: Content is protected !!