22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya
error: Content is protected !!