23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!