25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!