September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುವ ಘಟನೆ ಜ.15 ರಂದು ನಡೆದಿದೆ.

ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ (26) ಎಂಬವರ ದೂರಿನಂತೆ, ಜ. 04 ರಂದು ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಕಮೀಷನ್ ಪಡೆಯುವಂತೆ ಲಿಂಕ್ ಮತ್ತು ಮೇಸೆಜ್ ಬಂದಿರುತ್ತದೆ. ಅದರಂತೆ ಸುರೇಶ್ ರವರು ತಮ್ಮ ಬಾಬ್ತು ಖಾತೆ ವಿವರ ಮತ್ತು ಮೊಬೈಲ್ ನಂಬ್ರಗಳನ್ನು ನೀಡಿರುತ್ತಾರೆ. ಬಳಿಕ ಜ. 04 ರಿಂದ ಜ. 15 ರ ವರೆಗೆ ಒಟ್ಟು ರೂ 3,46,799/- ರೂ ಹಣವನ್ನು ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಪಿರ್ಯಾದಿದಾರರ ಬಾಬ್ತು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡು, ಯಾವುದೇ ಕಮೀಷನ್ ನೀಡದೇ ಹಾಗೂ ವರ್ಗಾಯಿಸಿಕೊಂಡ ಹಣವನ್ನೂ ಹಿಂತಿರುಗಿಸದೇ ವಂಚಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 02/2024 ಕಲಂ;419,420 IPC , & 66(D) IT Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya
error: Content is protected !!