April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಜ.15ರಂದು ಪೇಜಾವರ ಮಠದಲ್ಲಿ ಡಿ.ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ನೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ.ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

Related posts

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ