38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಜ.15ರಂದು ಪೇಜಾವರ ಮಠದಲ್ಲಿ ಡಿ.ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ನೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ.ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!