25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಜ.15ರಂದು ಪೇಜಾವರ ಮಠದಲ್ಲಿ ಡಿ.ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ನೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ.ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

Related posts

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!