25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಜ.15ರಂದು ಪೇಜಾವರ ಮಠದಲ್ಲಿ ಡಿ.ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ನೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ.ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!