22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಜ.15ರಂದು ಪೇಜಾವರ ಮಠದಲ್ಲಿ ಡಿ.ಹರ್ಷೇಂದ್ರ ಕುಮಾರ್ ಅವರು ಹಸ್ತಾಂತರಿಸಿದರು.

ಪೇಜಾವರ ಶ್ರೀಪಾದರು ಮಾತನಾಡಿ, ರಾಮ ದೇವರು ಮತ್ತು ರುದ್ರದೇವರಲ್ಲಿ ಇರುವ ಅನ್ನೋನ್ಯ ಭಾವನ್ನು ಶಾಸ್ತ್ರದಲ್ಲಿ ಗಮನಿಸಬಹುದಾಗಿದೆ. ಅಯೋಧ್ಯೆಯ ಶ್ರೀರಾಮ ದೇವರ ಸನ್ನಿಧಿಯಲ್ಲಿ ನಿತ್ಯ ಪೂಜೆಗೆ ಅನುಕೂಲವಾಗುವಂತೆ ಧರ್ಮಸ್ಥಳದಿಂದ ಸೇವೆಯ ರೂಪದಲ್ಲಿ ಪೂಜಾ ಪರಿಕರಗಳು ಬಂದಿವೆ. ಅದನ್ನು ಅಯೋಧ್ಯೆಗೆ ಮುಟ್ಟಿಸಲಿದ್ದೇವೆ ಎಂದು ಹಾರೈಸಿದರು.

ಡಿ.ಹರ್ಷೇಂದ್ರ ಕುಮಾರ್ ಅವರು ಮಾತನಾಡಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿರುವಂತೆ ಶ್ರೀ ಕ್ಷೇತ್ರದ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯ ಪೂಜೆಗೆ ಅವಶ್ಯವಿರುವ ಬೆಳ್ಳಿಯ ಪೂಜಾ ಪರಿಕರಗಳನ್ನು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿರುವ ಪೇಜಾವರ ಶ್ರೀಪಾದರ ಮುಖೇನ ಟ್ರಸ್ಟ್‌ಗೆ ಒಪ್ಪಿಸಿದ್ದೇವೆ. ಶ್ರೀರಾಮನ ಸನ್ನಿಧಿಯಲ್ಲಿ ನಡೆಯುವ ನಿತ್ಯ ಪೂಜೆಗೆ ಈ ಎಲ್ಲ ಪರಿಕರಗಳನ್ನು ಬಳಸಿಕೊಳ್ಳುವಂತೆ ಕೋರಿಕೊಂಡಿದ್ದೇವೆ ಎಂದು ಹೇಳಿದರು.

ವಿವಿಧ ಬಗೆಯ ಆರತಿ, ದೀಪ, ಶಂಖ, ತಂಬಿಗೆ, ಘಂಟೆ, ಹರಿವಾಣ, ದೇವರಿಗೆ ನೀರೆಯಲು ಅನುಕೂಲವಾಗುವ ಕೊಡಪಾನ ಹೀಗೆ ಹಲವು ಬೆಳ್ಳಿ ಪರಿಕರಗಳನ್ನು ಶ್ರೀ ಕ್ಷೇತ್ರದಿಂದ ಒಪ್ಪಿಸಲಾಗಿದೆ.

Related posts

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya
error: Content is protected !!