25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ( ರಿ.) ಧರ್ಮಸ್ಥಳ, ಗ್ರಾಮೀಣ ಶೇಷ್ಠತಾ ಕೇಂದ್ರ ಬೆಳ್ತಂಗಡಿಯ ಕೌಶಲ್ಯಭಿವೃದ್ಧಿ ತರಬೇತಿಯಡಿ ಯೋಜನೆಯ ಪಾಲುದಾರ ಬಂಧುಗಳಿಗೆ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಐದು ದಿನ ನಡೆಯುವ ಉಚಿತ ತರಬೇತಿಯನ್ನು ತಣ್ಣೀರುಪಂತ ವಲಯದ ಕುಪ್ಪೆಟ್ಟಿಯ ಬದ್ರಿಯಾ ಕಾಂಪ್ಲೆಕ್ಸ್ ನ ಆದಂರವರ ಕಟ್ಟಡದಲ್ಲಿ ತಣ್ಣೀರುಪಂತ ವಲಯದ ಪ್ರಗತಿಬಂದು ಸ್ವ ಸಹಾಯ ಸಂಘದ ವಲಯಾಧ್ಯಕ್ಷರಾದ ರಾಮಣ್ಣ ಗೌಡ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಯಶವಂತ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು, ವೇದಿಕೆಯಲ್ಲಿ ಜನಜಾಗೃತಿ ವಲಯಧ್ಯಕ್ಷ ಪ್ರಭಾಕರ ಗೌಡ ಪೋಸಂದೋಡಿ, ಟೈಲರಿಂಗ್ ಶಿಕ್ಷಕಿ ಉಷಾ ಉಪಸ್ಥಿತರಿದ್ದರು.ತರಬೇತಿಯಲ್ಲಿ ಸ್ವ ಉದ್ಯೋಗ ಮಾಡುವಲ್ಲಿ ಪ್ರೇರಣೆಯನ್ನು ಮತ್ತು ಉದ್ದೇಶದ ಬಗ್ಗೆ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ. ಕೆ ಮಾಹಿತಿ ನೀಡಿದರು. ಈ ಕಾರ್ಯಕ್ರಮವನ್ನು ಸೇವಾಪ್ರತಿನಿಧಿ ಸಂದ್ಯಾ ಪ್ರಾರ್ಥಿಸಿ, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಉಪನ್ಯಾಸಕಿ ಅಶ್ವಿನಿ ನಿರೂಪಿಸಿ, ಮೇಲ್ವಿಚಾರಕಿ ವಿದ್ಯಾ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಹರಿಣಿ ವಂದಿಸಿದರು

Related posts

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!