April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಸಕ್ರಿಯ ಸದಸ್ಯರು ಆಗಿರುವ ಲಿಂಗಪ್ಪ ನಾಯ್ಕ್(54ವರ್ಷ)ಬಡಕೋಡಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅತ್ಯುತ್ತಮ ಸಂಘಟಕರಾದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಇವರು ಚಿತ್ರ ಕಲಾವಿದರು ಆಗಿದ್ದರು. ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನ ಬಡಕೋಡಿ ಇದರ ಜೀರ್ಣೋದ್ದಾರ ಕಾರ್ಯದಲ್ಲಿ ಇವರ ಕೊಡುಗೆ ಅಪಾರವಾದುದು. ಸೆಂಟ್ರಲ್ ಮೆರೆಯಿನೆನ್ ಫಿಶೆರೀಸ್ ರೆಸೆರ್ಚ್ ಇನ್ಸ್ಟಿಟ್ಯೂಟ್ ಆಫ್ ಮಂಗಳೂರು (CMFRIM) ಇದರ ಕೃಷಿ ವಿಭಾಗದ ತಾಂತ್ರಿಕ ಅಧಿಕಾರಿಯಾಗಿದ್ದ ಇವರು ತಾಯಿ ಗುಲಾಬಿ, ಪತ್ನಿ ಹರಿಣಾಕ್ಷಿ ಮತ್ತು ಇಬ್ಬರು ಪುತ್ರಿಯರಾದ ಪ್ರತೀಕ್ಷಾ,ಅಪೇಕ್ಷಾ ಹಾಗೂ ಸಹೋದರಿಯರು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!