25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಸಕ್ರಿಯ ಸದಸ್ಯರು ಆಗಿರುವ ಲಿಂಗಪ್ಪ ನಾಯ್ಕ್(54ವರ್ಷ)ಬಡಕೋಡಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅತ್ಯುತ್ತಮ ಸಂಘಟಕರಾದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಇವರು ಚಿತ್ರ ಕಲಾವಿದರು ಆಗಿದ್ದರು. ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನ ಬಡಕೋಡಿ ಇದರ ಜೀರ್ಣೋದ್ದಾರ ಕಾರ್ಯದಲ್ಲಿ ಇವರ ಕೊಡುಗೆ ಅಪಾರವಾದುದು. ಸೆಂಟ್ರಲ್ ಮೆರೆಯಿನೆನ್ ಫಿಶೆರೀಸ್ ರೆಸೆರ್ಚ್ ಇನ್ಸ್ಟಿಟ್ಯೂಟ್ ಆಫ್ ಮಂಗಳೂರು (CMFRIM) ಇದರ ಕೃಷಿ ವಿಭಾಗದ ತಾಂತ್ರಿಕ ಅಧಿಕಾರಿಯಾಗಿದ್ದ ಇವರು ತಾಯಿ ಗುಲಾಬಿ, ಪತ್ನಿ ಹರಿಣಾಕ್ಷಿ ಮತ್ತು ಇಬ್ಬರು ಪುತ್ರಿಯರಾದ ಪ್ರತೀಕ್ಷಾ,ಅಪೇಕ್ಷಾ ಹಾಗೂ ಸಹೋದರಿಯರು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya
error: Content is protected !!